ಬಾನು ಭುವಿಗೆ ಇಳಿಸಿದ ಮೊದಲ ಮಳೆಗೆ
ಭುವಿಯು ಕೊಟ್ಟ ಹಸಿರ ಉಡುಗೊರೆಯ ಕಳೆಗೆ
ಸರಿಸಾಟಿಯಾವುದಿಲ್ಲಿ, ಸಡಗರದ ಸಂಭ್ರಮಕೆ.
ಮೊನ್ನೆತಾನೆ ನಾಡ ಗೌರಿಗೆ ಕಾಡ ಕಡವೆಯ
ಒಲಿದ ಪ್ರೀತಿಯ ಅದ್ಭುತ ಉಡುಗೊರೆ “ಚುಕ್ಕಿ”ಗೆ
ಸರಿಸಾಟಿಯಾವುದಿಲ್ಲಿ, ಸಡಗರದ ಸಂಭ್ರಮಕೆ.
ಮರಕ್ಕೊಂದು ಹಕ್ಕಿ, ಹಕ್ಕಿಗೊಂದು ಮರ
ಎಲ್ಲ ಜೀವಕೂ ದೇವರು ನೀಡಿದ ವರ
ಸರಿಸಾಟಿಯಾವುದಿಲ್ಲಿ, ಸಡಗರದ ಸಂಭ್ರಮಕೆ.
ನನ್ನ ಜೀವಕೆ ಜೀವವಾದ ನೀನು ಅಮರ.
- ಗುಬ್ಬಚ್ಚಿ ಸತೀಶ್.