ಶನಿವಾರ, ಅಕ್ಟೋಬರ್ 30, 2010

ನಾನು “ಕಾಲ”

ಇದೀಗ ತಾನೆ

ಎಲ್ಲಾ ತಂಪಿತ್ತು

ಬಿಸಿ ವಕ್ಕರಿಸಿದಾದರೂ

ಯಾವಾಗ?


ಮೃಷ್ಟಾನ ಭೋಜನ

ಎಂಥಾ ರುಚಿಯಿತ್ತು

ಊಟ ಮುಗಿದಿದ್ದಾದರು

ಯಾವಾಗ?


ನಮಗೆಲ್ಲಾ ವಯಸ್ಸಾಯ್ತು

ಅದು ನಿಮಗಿದೆ

ವಯಸ್ಸಿಗೇ ವಯಸ್ಸಾದದ್ದು

ಯಾವಾಗ?


ಏ! ಯಾರೋ ನೀನು?

ಅಯ್ಯೋ! ನೀ ಸತ್ತೆಯಾ!!

ನೀ ನನ್ನ ಬದುಕಿಸಿದ್ದಾದರೂ

ಯಾವಾಗ?


ನಾನು, ನಾನು

ನಾನು, ನಾನು

ನಾನು ನೀ ಆಗಿದ್ದಾದರು

ಯಾವಾಗ?


ನಾನು “ಕಾಲ!”

ಬಳಿಯಿದ್ದಾಗ ಮರೆತು

ಕಾಲ ಬಳಿ ಬಿಟ್ಟಿರಿ

ನಿಮ್ಮನಗಲಿದಾಗ!


ಆವಾಗ?

ಒಂದಾನೊಂದು ಕಾಲದಲ್ಲಿ...

2 ಕಾಮೆಂಟ್‌ಗಳು:

ರಂಗಸ್ವಾಮಿ ಮೂಕನಹಳ್ಳಿ ಅವರ "ಲಕ್ಷಾಧಿಪತಿಯ ಗುಣಲಕ್ಷಣಗಳು"

ಸ್ನೇಹಿತರೇ, ನಮಸ್ಕಾರ. ಖ್ಯಾತ ಹಣಕಾಸು ತಜ್ಞರಾದ ರಂಗಸ್ವಾಮಿ ಮೂಕನಹಳ್ಳಿ ಅವರ "ಲಕ್ಷಾಧಿಪತಿಯ ಗುಣಲಕ್ಷಣಗಳು -  ಹಣ, ಸಂಪತ್ತು ಮತ್ತು ಯಶಸ್ಸಿನ ಹಿಂದಿನ ಸರಳ ಅಭ್ಯಾ...