ಶುಕ್ರವಾರ, ಡಿಸೆಂಬರ್ 24, 2010

ಜೀವ ಚೇತನ

ಜೀವ ಚೇತನದ ಆದ್ಯಂತ ಪಯಣಕೆ

ಹೆಜ್ಜೆಗೊಂದು ಸಡ್ಡು ಹೊಡೆದ ಸವಾಲು

ಬಿರುಗಾಳಿಗೆ ಸಿಲುಕಿದ ಗಾಳಿಪಟ ಮನ

ಯಾವ ಹಾದಿ, ಪರಿಹಾರಗಳೇ ವಿರಳ


ನಿರ್ಭಯತೆಯಿಂದ ಮುನ್ನುಗುತ್ತಿರು

ಹೊಸ ಅರುಣೋದಯವು ಗೋಚರಿಸಲಿ

ಕಟ್ಟು ಕಷ್ಟಗಳ ಮೂಟೆ, ಹೆಜ್ಜೆ ಮುಂದಿಡು

ಬದಲಾವಣೆ ಬಲುಕಷ್ಟ, ಅಚ್ಚರಿಯು ಕಾದಿದೆ


ನಿನೆಂದೂ ಗ್ರಹಿಸದ ತಿರುವಿದೆ ಮುಂದೆ

ಕಲ್ಪನೆಗೂ ನಿಲುಕದ ಕನಸು ನನಸಾಗಲಿದೆ

ಬಹುಶಃ ನಿನ್ನದೇ ಹೊಸಲೋಕ, ಅದ್ಬುತ!

ಬಹುದೂರವಾದರು ರಮಣೀಯ ದೃಶ್ಯಗಳು


ಒಲುಮೆಯ ಜನ, ಹಾರ್ದಿಕ ಶುಭಾಷಯಗಳು

ನಿನ್ನ ಕಥೆಗೆ, ಭಾವನೆಗಳಿಗೆ ಕಿವಿಗೊಡುವವರು

ನೀನಿಟ್ಟ ಹೆಜ್ಜೆಯ ಹಾದಿಗೆ ಹೂವಾದವರು

ಅಶ್ವಿನಿ ದೇವಂತೆಗಳಾದ ಜೀವದ ಗೆಳೆಯರು


ಇನ್ನೇಕೆ ಭಯ? ಒಂದೆಜ್ಜೆ ಮುಂದಿರಲಿ ಎಲ್ಲರಿಗಿಂತ

ಜೀವನದ ಅನುಕ್ಷಣವನ್ನು ಪ್ರೀತಿಸು

ಮುಂದಿನ ಹಾದಿಯಲ್ಲಿ ಎಲ್ಲ ಮರೆಸುವ ಮುಂಬೆಳಕಿದೆ

ಹಿಂತಿರುಗಿ ನೋಡದಿರು ನಿನ್ನ ದಾರಿ ಅದಲ್ಲ

1 ಕಾಮೆಂಟ್‌:

ದಾವಣಗೆರೆಯಲ್ಲಿ ಸಿಟಿ ಬಸ್‌ ಹಿಡಿದು...

 ಸ್ನೇಹಿತರೇ, ನಮಸ್ಕಾರ. ನಾನು 2025ರ ಆಗಸ್ಟ್‌ ತಿಂಗಳಿನಿಂದ ದಾವಣಗೆರೆ ನಿವಾಸಿಯಾಗಿರುವುದು ನಿಮಗೆಲ್ಲಾ ಗೊತ್ತೇ ಇದು. 2020ರ ಆಗಸ್ಟ್‌ ತಿಂಗಳಿನಿಂದ ನಾನು ನನ್ನ ಪ್ರೀತಿ...