ಶುಕ್ರವಾರ, ಜನವರಿ 7, 2011

ಸುಗ್ಗಿ ಪ್ರೀತಿ

ಹೊಸ ವರುಷದ ಸನಿಹದಲ್ಲಿ

ದಿವ್ಯ ಬೆಳಕಿನ ಸನ್ನಿಧಿಯಲ್ಲಿ

ಕಾದಿರುವೆ ನನ್ನ ಚೇತನವೆ

ನಿನಗಾಗಿ ನಿನಗಾಗಿ ನಿನಗಾಗಿ


ಹಳೇ ವರುಷದ ಚಿಗುರು

ಹೊಸ ವರುಷದಲಿ ಪೈರಾಗಿ

ತೆನೆ ತೆನೆಯಲೂ ಚಿಮ್ಮಲಿ

ಸಂಭ್ರಮ ಸುಗ್ಗಿಯ ಸಡಗರದಲ್ಲಿ


ಹೊಸ ವಸಂತ ಹೊಸ ದಿಗಂತ

ನನ್ನೆದೆಯ ನಿನ್ನೆದೆಯ ಕೋಗಿಲೆಗೆ

ಹೊಸ ದನಿಯಾಗಿ ಸೃಜಿಸಲಿ

ನಮ್ಮ ಪ್ರೀತಿಯು ಹಸಿರಾಗಲಿ.

                            - ಗುಬ್ಬಚ್ಚಿ ಸತೀಶ್
(ಈ ಕವನ ನಾನು ಸೇಂಟ್ಸ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನನ್ನ ನಲ್ಲೆಯ ಸೇವೆಯನ್ನು ನೋಡಿ ಬಿಲ್ ಹಿಂಭಾಗದಲ್ಲಿ ಬರೆದದ್ದು. ಪ್ರೇರಣೆ: ಜಿ.ಎಸ್.ಎಸ್ ರವರ "ಬೆಳಗು ಬಾ ಹಣತೆಯನು" ಕವನ. ಹೊಸವರ್ಷದ ಮತ್ತು ಸಂಕ್ರಾತಿಯ ಶುಭಾಷಯಗಳೊಂದಿಗೆ - ಗುಬ್ಬಚ್ಚಿ ಕುಟುಂಬ)

ಶುಕ್ರವಾರ, ಡಿಸೆಂಬರ್ 24, 2010

ಜೀವ ಚೇತನ

ಜೀವ ಚೇತನದ ಆದ್ಯಂತ ಪಯಣಕೆ

ಹೆಜ್ಜೆಗೊಂದು ಸಡ್ಡು ಹೊಡೆದ ಸವಾಲು

ಬಿರುಗಾಳಿಗೆ ಸಿಲುಕಿದ ಗಾಳಿಪಟ ಮನ

ಯಾವ ಹಾದಿ, ಪರಿಹಾರಗಳೇ ವಿರಳ


ನಿರ್ಭಯತೆಯಿಂದ ಮುನ್ನುಗುತ್ತಿರು

ಹೊಸ ಅರುಣೋದಯವು ಗೋಚರಿಸಲಿ

ಕಟ್ಟು ಕಷ್ಟಗಳ ಮೂಟೆ, ಹೆಜ್ಜೆ ಮುಂದಿಡು

ಬದಲಾವಣೆ ಬಲುಕಷ್ಟ, ಅಚ್ಚರಿಯು ಕಾದಿದೆ


ನಿನೆಂದೂ ಗ್ರಹಿಸದ ತಿರುವಿದೆ ಮುಂದೆ

ಕಲ್ಪನೆಗೂ ನಿಲುಕದ ಕನಸು ನನಸಾಗಲಿದೆ

ಬಹುಶಃ ನಿನ್ನದೇ ಹೊಸಲೋಕ, ಅದ್ಬುತ!

ಬಹುದೂರವಾದರು ರಮಣೀಯ ದೃಶ್ಯಗಳು


ಒಲುಮೆಯ ಜನ, ಹಾರ್ದಿಕ ಶುಭಾಷಯಗಳು

ನಿನ್ನ ಕಥೆಗೆ, ಭಾವನೆಗಳಿಗೆ ಕಿವಿಗೊಡುವವರು

ನೀನಿಟ್ಟ ಹೆಜ್ಜೆಯ ಹಾದಿಗೆ ಹೂವಾದವರು

ಅಶ್ವಿನಿ ದೇವಂತೆಗಳಾದ ಜೀವದ ಗೆಳೆಯರು


ಇನ್ನೇಕೆ ಭಯ? ಒಂದೆಜ್ಜೆ ಮುಂದಿರಲಿ ಎಲ್ಲರಿಗಿಂತ

ಜೀವನದ ಅನುಕ್ಷಣವನ್ನು ಪ್ರೀತಿಸು

ಮುಂದಿನ ಹಾದಿಯಲ್ಲಿ ಎಲ್ಲ ಮರೆಸುವ ಮುಂಬೆಳಕಿದೆ

ಹಿಂತಿರುಗಿ ನೋಡದಿರು ನಿನ್ನ ದಾರಿ ಅದಲ್ಲ

ಮಂಗಳವಾರ, ಡಿಸೆಂಬರ್ 7, 2010

ಮಳೆಯಾಗು ನೀ... (ನಮ್ಮ ಮಗುವೆ)

ಮಿಂಚದಿರು ನೀನು

ಮಿಂಚಿದರೆ ಚೆಂದ

ಮಳೆಗೆ ಮುನ್ಸೂಚನೆ!

ಆದರೆ, ಆ ಬೆಳಕು

ಕ್ಷಣಿಕ ಸುಖ

ಮಿಂಚದಿರು ನೀನು



ಎಂದಿಗೂ ಗುಡುಗದಿರು

ಗುಡುಗೆಂದರೆ ಭಯ

ಮಳೆ ಶುರುವಾಗಬಹುದ?

ಆದರೆ, ಆ ಶಬ್ಧ

ಕ್ಷಣಿಕ ದುಃಖ

ಎಂದಿಗೂ ಗುಡುಗದಿರು



ಮಳೆ, ಮಳೆಯಾಗು ನೀ

ಮಳೆಯೆಂದರೆ ಬೆಳೆ

ಬದುಕು ಚಿಗುರುತ್ತದೆ!

ಆದರೆ, ಆ ಹಸಿರು

ಸುಃಖ ದುಃಖಗಳ ಬಸಿದು

ಹೆತ್ತವರ ಮನಕೆ ತಂಪೆರೆಯಲಿ

ಅತಿವೃಷ್ಠಿ-ಅನಾವೃಷ್ಠಿಯಾಗದ

ಮಳೆ, ಮಳೆಯಾಗು ನೀ...

---

ದಾವಣಗೆರೆಯಲ್ಲಿ ಸಿಟಿ ಬಸ್‌ ಹಿಡಿದು...

 ಸ್ನೇಹಿತರೇ, ನಮಸ್ಕಾರ. ನಾನು 2025ರ ಆಗಸ್ಟ್‌ ತಿಂಗಳಿನಿಂದ ದಾವಣಗೆರೆ ನಿವಾಸಿಯಾಗಿರುವುದು ನಿಮಗೆಲ್ಲಾ ಗೊತ್ತೇ ಇದು. 2020ರ ಆಗಸ್ಟ್‌ ತಿಂಗಳಿನಿಂದ ನಾನು ನನ್ನ ಪ್ರೀತಿ...