ಸ್ನೇಹಿತರೇ,
ನನಗೆ ಮತ್ತೊಂದು ಪ್ರಮುಖ ಕಥೆ, ಕಾವ್ಯ ಸ್ಪರ್ಧೆಯ ವಿವರಗಳು ಲಭ್ಯವಾಗಿದ್ದು, ಇದನ್ನು ನಿಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇನೆ.
ವಿವರಗಳಿಗೆ...
ಶುಭವಾಗಲಿ,
- ಗುಬ್ಬಚ್ಚಿ ಸತೀಶ್.
ಸ್ನೇಹಿತರೇ,
ನನಗೆ ಮತ್ತೊಂದು ಪ್ರಮುಖ ಕಥೆ, ಕಾವ್ಯ ಸ್ಪರ್ಧೆಯ ವಿವರಗಳು ಲಭ್ಯವಾಗಿದ್ದು, ಇದನ್ನು ನಿಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇನೆ.
ವಿವರಗಳಿಗೆ...
ಶುಭವಾಗಲಿ,
- ಗುಬ್ಬಚ್ಚಿ ಸತೀಶ್.
ಸುವರ್ಣ ಕರ್ನಾಟಕ ಕಾವ್ಯ ಪುರಸ್ಕಾರಕ್ಕಾಗಿ ಕವನ ಸಂಕಲನಗಳ ಅಹ್ವಾನ...
ರಾಜ್ಯಮಟ್ಟದ ಸಾಹಿತ್ಯಾತ್ಮಕ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ವತಿಯಿಂದ ಕರ್ನಾಟಕ ರಾಜೋತ್ಸವದ ಸುವರ್ಣ ಮಹೋತ್ಸವದ ಅಂಗವಾಗಿ ಮುಂಬರುವ ಜೂನ್ ತಿಂಗಳಿನಲ್ಲಿ ರಾಜ್ಯ ಮಟ್ಟದ ಕನ್ನಡ ಹಬ್ಬ ನಡೆಸಲು ಯೋಜಿಸಲಾಗಿದೆ.
ಇದರ ಅಂಗವಾಗಿ ರಾಜ್ಯ ಮಟ್ಟದ ಕವನ ಸಂಕಲನ ಸ್ಪರ್ಧೆ ಏರ್ಪಡಿಸಲಾಗಿದೆ. 2023 ಹಾಗೂ 24 ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಕವನ ಸಂಕಲನಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದು. ಆಯ್ಕೆಯಾದ ಹತ್ತು ಅತ್ಯುತ್ತಮ ಕವನ ಸಂಕಲನಗಳಿಗೆ ರಾಜ್ಯ ಮಟ್ಟದ ಸುವರ್ಣ ಕರ್ನಾಟಕ ಕಾವ್ಯ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
ಇದೇ ಸಂದರ್ಭದಲ್ಲಿ ಕೆ.ಎಸ್.ನ. ಕೃತಿ, ಉದಯೋನ್ಮುಖ ಕವಿಗಳ ಕೃತಿಗಳ ಲೋಕಾರ್ಪಣೆ, ಕೆ.ಎಸ್.ನ. ಕಾವ್ಯ ಪುರಸ್ಕಾರ ಪ್ರಧಾನ,ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮಗಳು ಜರುಗಲಿವೆ.
ಆಸಕ್ತಿಯುಳ್ಳ ಕವಿಗಳು ಹಾಗೂ ಕವಯತ್ರಿಯರು ತಾವು 2023 ಅಥವಾ 2024ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಕವನಸಂಕಲನದ ಮೂರು ಪ್ರತಿಗಳನ್ನು ತಮ್ಮ ಸ್ವವಿವರ ಹಾಗೂ ಭಾವಚಿತ್ರದೊಂದಿಗೆ ಮೇ ತಿಂಗಳ 20ರ ಒಳಗಾಗಿ ತಲುಪುವಂತೆ ಡಾ. ಭೇರ್ಯರಾಮಕುಮಾರ್, ಅಧ್ಯಕ್ಷರು, ಗ್ರಾಮಾಂತರ ಬುದ್ಧಿ ಜೀವಿಗಳ ಬಳಗ, ಅರ್ಕೇಶ್ವರ ನಗರ ಬಡಾವಣೆ,ವಾರ್ಡ್ ನಂಬರ್ 6, ಕೆ.ಆರ್.ನಗರ ಟೌನ್, ಮೈಸೂರು ಜಿಲ್ಲೆ, ಕರ್ನಾಟಕ, ಪಿನ್ -571602 ಈ ವಿಳಾಸಕ್ಕೆ ಕಳಿಸುವುದು.
ಹೆಚ್ಚಿನ ವಿವರಗಳಿಗೆ 6363172368 ಡಾ. ಭೇರ್ಯ ರಾಮಕುಮಾರ್ ಇವರನ್ನು ಸಂಪರ್ಕಿಸುವುದು.
ವಿವಿಧ ದತ್ತಿ ಪುಸ್ತಕ ಪುರಸ್ಕಾರಗಳು...
ಕನ್ನಡ ಸಾಹಿತ್ಯ ಪರಿಷತ್ತು 2023ನೇ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಕೃತಿಗಳನ್ನು ಆಹ್ವಾನಿಸಿದೆ.
2023 ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2023ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 53 ವಿವಿಧ ಪುಸ್ತಕಗಳಿಗೆ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಅನೇಕ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು ಒಟ್ಟಾರೆ 57ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560
018’ ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ.
www.kasapa.in ಅಥವಾ ದೂರವಾಣಿ ಸಂಖ್ಯೆ
080-26612991/26623584 ಇವುಗಳ ಮೂಲಕವೂ ಮಾಹಿತಿಯನ್ನು ಪಡೆಯ ಬಹುದಾಗಿದೆ.
ಸ್ನೇಹಿತರೇ, ನಟ ವಿನೋದ್ ಪ್ರಭಾಕರ್ ಅಭಿನಯದ "ಮಾದೇವ" ಸಿನಿಮಾ ಜೂನ್ 6ರಂದು ಬಿಡುಗಡೆಯಾಯಿತು. ನವೀನ್ ರೆಡ್ಡಿ ಬಿ. ಅವರ ನಿರ್ದೇಶನದ ಈ ಸಿನಿಮಾವನ್ನು ನಾ...