ಬುಧವಾರ, ಮಾರ್ಚ್ 16, 2022

ಅಪ್ಪು ಈಗ ಡಾ. ಅಪ್ಪು ಡಾ. ಪುನೀತ್ ರಾಜ್ ಕುಮಾರ್

ಸ್ನೇಹಿತರೇ, ನಮ್ಮೆಲ್ಲರ ಪ್ರೀತಿಯ ನಟ ಪುನೀತ್‌ ರಾಜ್‌ ಕುಮಾರ್‌ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಪ್ರಕಟಿಸಿದೆ. ಪುನೀತ್‌ ಅವರ ಸಾಮಾಜಿಕ ಸೇವಾ ಕಾರ್ಯ ಹಾಗೂ ಚಿತ್ರರಂಗದಲ್ಲಿನ ಸಾಧನೆ ಪರಿಗಣಿಸಿ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರವಾಗಿ ಗೌರವ ಡಾಕ್ಟರ್‌ ಪ್ರದಾನ ಮಾಡಲಿದೆ ಎಂದು ಕುಲಪತಿಗಳಾದ ಪ್ರೊ. ಬಿ. ಹೇಮಂತ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದು ಪುನೀತ್‌ ಅವರ ಜನ್ಮದಿನಕ್ಕೆ ವಿವಿ ನೀಡುತ್ತಿರುವ ಪುಟ್ಟ ಉಡುಗೊರೆ ಎಂದಿದ್ದಾರೆ. ಪುನೀತ್‌ ಅವರ ಪತ್ನಿ ಶ್ರೀಮತಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದು ಕೂಡ ತಿಳಿಸಿದ್ದಾರೆ. ಡಾ. ರಾಜ್‌ಕುಮಾರ್‌ ಅವರಿಗೆ 1976ರಲ್ಲಿ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗಿತ್ತು.


ಈ ಗೌರವದಿಂದ ಎಲ್ಲರ ಪ್ರೀತಿಯ ಅಪ್ಪು, ಡಾ. ಅಪ್ಪು... ಡಾ. ಪುನೀತ್‌ ರಾಜ್‌ ಕುಮಾರ್‌ ಆಗಲಿದ್ದಾರೆ...
***
ಈ ಮಾಹಿತಿಯ ನನ್ನ ಯೂಟ್ಯೂಬ್‌ ಲಿಂಕ್‌ :
ಅಪ್ಪು ಈಗ ಡಾ. ಅಪ್ಪು ಡಾ|| ಪುನೀತ್ ರಾಜ್‌ಕುಮಾರ್
https://youtu.be/1etPM3c3ftA


ಭಾನುವಾರ, ಮಾರ್ಚ್ 13, 2022

ವಿಜಯನಗರ ಸಾಮ್ರಾಜ್ಯ ಕುರಿತ ಆದಿಗ್ರಂಥ

 ವಿಜಯನಗರ ಸಾಮ್ರಾಜ್ಯ ಕುರಿತ ಆದಿಗ್ರಂಥ

ವಿಜಯನಗರ ಸಾಮ್ರಾಜ್ಯದ ಹಿರಿಮೆ ಗರಿಮೆಗಳನ್ನು ಕಣ್ಣು ಕಂಡರಿಯದು, ಕಿವಿ ಕೇಳರಿಯದು ಎಂದು ಬೇರೆ ಬೇರೆ ದೇಶಗಳಿಗೆ ಸೇರಿದ ವಿದೇಶಿ ಪ್ರವಾಸಿಗಳು ಬೆರಗುಗೊಂಡು ತಮಗಾದ ಬೆರಗನ್ನು ವರದಿ ಮಾಡಿದರೆ, ಬ್ರಿಟಿಷ್‌ ಆಡಳಿತದಲ್ಲಿ ಬಳ್ಳಾರಿಯ ಜಿಲ್ಲಾಧಿಕಾರಿಯಾಗಿದ್ದ ರಾಬರ್ಟ್‌ ಸೆವೆಲ್‌ ತನ್ನ ಮೇಲಧಿಕಾರಿಗಳಿಗೆ ವಿಜಯನಗರ ಸಾಮ್ರಾಜ್ಯ ಕುರಿತು ತಿಳಿಸಲು “A Forgotten Empire” ಕೃತಿಯನ್ನು ರಚಿಸಿದರು. ಈ ಕೃತಿಯೇ ವಿಜಯನಗರ ಸಾಮ್ರಾಜ್ಯ ಕುರಿತ ಆದಿಗ್ರಂಥ... 1900 ರಲ್ಲಿ ಈ ಕೃತಿ ಮೊದಲಿಗೆ ಪ್ರಕಟಗೊಂಡಿತು. ಈ ಕೃತಿ ವಿಜಯನಗರ ಸಾಮ್ರಾಜ್ಯ ಕುರಿತ ಅಮೂಲ್ಯ ಆಖರಗ್ರಂಥವೂ ಹೌದು. ಇದು ವಿಜಯನಗರದ ಸಾಮ್ರಾಜ್ಯದ ವಿಸ್ತಾರ, ಘನತೆ, ವೈಭವಗಳ ಬಗೆಗೆ ಜಗತ್ತಿನ ಗಮನ ಸೆಳೆದ ಪ್ರಥಮಗ್ರಂಥ!

ಸ್ವತಃ ಸಾಹಿತಿಯಲ್ಲದ್ದಿದ್ದರೂ ರಾಬರ್ಟ್‌ ಸೆವೆಲ್‌ ಇತಿಹಾಸವನ್ನು ದಾಖಲಿಸಲು “A Forgotten Empire” ಕೃತಿಯನ್ನು ರಚಿಸಿದರೆ, ಇದನ್ನು ಕನ್ನಡಕ್ಕೆ ಸದಾನಂದ ಕನವಳ್ಳಿ ಅವರು ಯಥಾವತ್ತಾಗಿ “ಮರೆತುಹೋದ ಮಹಾಸಾಮ್ರಾಜ್ಯ ವಿಜಯನಗರ” ಎಂದು ಅನುವಾದಿಸಿದ್ದಾರೆ. ಈ ಕೃತಿಯ ಮೌಲಿಕತೆಯನ್ನು ಮನಗಂಡು ಹಂಪಿಯ ಕನ್ನಡ ವಿಶ್ವವಿದ್ಯಾಲಯ ತನ್ನ ಪ್ರಥಮ ನುಡಿಹಬ್ಬದಂದು ಈ ಕೃತಿಯನ್ನು 1992ರಲ್ಲಿ ಪ್ರಕಟಿಸಿದ್ದರೆ, ಆನಂತರ ಇದೊಂದು ಅಧಿಕೃತ, ಬೇಡಿಕೆಯುಳ್ಳ ಕೃತಿಯೆಂದು ಮನಗಂಡ ʼಅಂಕಿತ ಪುಸ್ತಕʼ ಮರುಮುದ್ರಿಸಿದೆ.



ಒಂದು ಕಾಲದಲ್ಲಿ ವೈಭವದಿಂದ ಮೆರೆದ ವಿಜಯನಗರ ಮಹಾಸಾಮ್ರಾಜ್ಯದ ವಿಸ್ತಾರ, ಘನತೆ, ವೈಭವಗಳನ್ನು ಈ ಕೃತಿ ವರ್ಣಿಸುತ್ತದೆ. ಈ ಸಾಮ್ರಾಜ್ಯದ ಆರಂಭ – ವೈಭವ ಕುರಿತಂತೇ ಅನೇಕ ದಂತ ಕತೆಗಳಿವೆ. ಕೃಷ್ಣದೇವರಾಯನ ಕಾಲಕ್ಕೆ ಉತ್ತುಂಗಕ್ಕೇರಿದ್ದ ವಿಜಯನಗರ ಸಾಮ್ರಾಜ್ಯ ವೈಭವದ ನಂತರ ಅವನತಿಯ ಹಾದಿ ಹಿಡಿಯಿತು. ವೈಭವದಲ್ಲಿರುವಾಗಲೇ ಒಳಜಗಳ – ಆಂತರಿಕ ಕಿತ್ತಾಟ ಮತ್ತು ತಾಳೀಕೋಟೆಯ ಯುದ್ಧ ವಿಜಯನಗರವನ್ನು ಅಧಃಪಾತಾಳಕ್ಕಿಳಿಸಿತು. ನಂತರ ನಡೆದ ರಾಜ್ಯದ ಲೂಟಿ ಎಲ್ಲ ವೈಭವವನ್ನೂ ನೆಲಸಮಗೊಳಿಸಿತು. ಈ ಕೃತಿ ವಿಜಯನಗರದ ಏಳು- ಬೀಳುಗಳನ್ನು ಸಮಗ್ರವಾಗಿ ಚಿತ್ರಿಸಿದೆ. ಇತಿಹಾಸದ ವಸ್ತುನಿಷ್ಠ ಅಧ್ಯಯನಕ್ಕೆ ಮಾದರಿಯಾಗಿ ಕೂಡ ನಿಲ್ಲುತ್ತದೆ.

ಈ ಕೃತಿಯಲ್ಲಿ ಪೀಠಿಕೆಯನ್ನೊಳಗೊಂಡು ಹದಿನೇಳು ಅಧ್ಯಾಯಗಳಿವೆ. ಪುಸ್ತಕದ ಕೊನೆಯಲ್ಲಿ ಅನುಬಂಧಗಳನ್ನು ನೀಡಲಾಗಿದೆ. ವಿಜಯನಗರ ಸಾಮ್ರಾಜ್ಯದ ಮೂಲ, ಸಾಮ್ರಾಜ್ಯದ ಪ್ರಥಮ ರಾಜರು, ಸಾಮ್ರಾಜ್ಯದ ಬೆಳವಣಿಗೆ, ಒಂದನೇಯ ದೇವರಾಯ, ಎರಡನೆಯ ದೇವರಾಯ, ಎರಡನೆಯ ದೇವರಾಯನ ಆಳ್ವಿಕೆಯಲ್ಲಿ ವಿಜಯನಗರ ನಗರ, ಪ್ರಥಮ ರಾಜವಂಶದ ಮುಕ್ತಾಯ, ಎರಡನೆಯ ರಾಜವಂಶದ ಪ್ರಥಮ ರಾಜರು, ಕೃಷ್ಣದೇವರಾಯನ ಆಳ್ವಿಕೆ, ರಾಯಚೂರ ದಾಳಿ ಮತ್ತು ಯುದ್ಧ ಮತ್ತು ಕೃಷ್ಣನ ಆಳ್ವಿಕೆಯ ಕೊನೆ, ಕೃಷ್ಣದೇವರಾಯನ ಕಟ್ಟಡಗಳು, ನಿರ್ಮಾಣಗಳು ಮತ್ತು ಶಾಸನಗಳು, ಅಚ್ಯುತರಾಯನ ಆಳ್ವಿಕೆ, ಅಂತ್ಯದ ಆದಿ, ವಿಜಯನಗರದ ವಿನಾಶ, ಮೂರನೆಯ ರಾಜವಂಶ, ಬ್ಯಾರಡಸ್‌ನ ಕಥಾನಕ, ಪ್ಯಾಸ್‌ ಮತ್ತು ನೂನೀಜ್‌ರ ದಿನಚರಿಗಳು, ಡೊಮಿಂಗೊಸ್‌ ಪ್ಯಾಸ್‌ ನ ಕಥನ, ಫರ್ನಾಒ ನೂನಿಜ್‌ ನ ದಿನಚರಿ ಯ ಬಗ್ಗೆ ನಾವು ತಿಳಿದುಕೊಳ್ಳಬಹುದಾಗಿದೆ.

ಒಟ್ಟು 448 ಪುಟಗಳ ಈ ಅಮೂಲ್ಯ ಪುಸ್ತಕದ ಮೌಲ್ಯ ರೂ. 450/- 

ಈ ಪುಸ್ತಕವನ್ನು ಗೋಮಿನಿ ಪ್ರಕಾಶನದ ಆನ್‌ ಲೈನ್‌ ಬುಕ್‌ ಶಾಪ್‌ ನ ಲಿಂಕಿನ ಮೂಲಕ ಕೊಳ್ಳಬಹುದಾಗಿದೆ... 

https://www.gominiprakashana.com/product/3169543/-10-off/

ಈ ಪುಸ್ತಕ ಕುರಿತು ನಾನು ಮಾಡಿರುವ ವಿಡಿಯೋವನ್ನು  ಯೂಟ್ಯೂಬಿನಲ್ಲಿ ವೀಕ್ಷಿಸಲು ಕೆಳಗಿನ ಲಿಂಕ್‌ ಉಪಯೋಗಿಸಿ,,,

https://www.youtube.com/watch?v=ASF4SD50QQQ

ಈ ಪೋಸ್ಟ್‌ ಕುರಿತು ತಪ್ಪದೇ ಕಾಮೆಂಟ್‌ ಮಾಡಿ, ಧನ್ಯವಾದಗಳು.

***

ಶುಕ್ರವಾರ, ನವೆಂಬರ್ 15, 2019

ಕನ್ನಡದ ಮೇಲಿನ ಅನನ್ಯ ಪ್ರೀತಿಯ ಜೊತೆಗೆ


(ವಿಶೇಷ ಸೂಚನೆ: ಈ ಪೋಸ್ಟನ್ನು ಪೂರ್ತಿ ಓದಿ, ನಿಮ್ಮ ಅನಿಸಿಕೆ ಕಾಮೆಂಟಿಸಿ. ಇದು ನಿಮಗೆ ಪಾಠವಾದರೂ ಆಗಬಹುದು! ಯಾರಿಗೊತ್ತು?)

ಕನ್ನಡದ ಮೇಲಿನ ಅನನ್ಯ ಪ್ರೀತಿಯ ಜೊತೆಗೆ ನಾನು ಓದಿದ್ದು ಸಂಸ್ಕೃತ ಸಾಹಿತ್ಯ ಮತ್ತು ಇಂಗ್ಲೀಷ್ ಸಾಹಿತ್ಯ. ಪದವಿಯವರೆಗೆ ಸಂಸ್ಕೃತವನ್ನು ಮೊದಲ ಭಾಷೆಯಾಗಿ ಕಲಿತವನಿಗೆ ಅದರ ಸಾಹಿತ್ಯ ಇವತ್ತಿಗೂ ಕಾಡುತ್ತಿದೆ. ಆ ನಂತರ ಸಾಹಿತ್ಯದ ಮೇಲಿನ ಪ್ರೀತಿಯಿಂದ ಕನ್ನಡ ಸಾಹಿತ್ಯವನ್ನು ಹಾಗೇ ಓದಿಕೊಳ್ಳಬಹುದು ಎಂದು ಭಾವಿಸಿ ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಇದರಿಂದ ಕೆಲಸವೂ ಸಿಗಬಹುದು ಎಂಬ ಪುಟ್ಟ ಆಸೆಯೂ ಇತ್ತು. ಆದರೆ, ಆಗಾಗ ಕನ್ನಡ ಸಾಹಿತ್ಯವನ್ನು ಓದುವುದನ್ನು ಬಿಡಲಿಲ್ಲ. ಬರೆಯಲು ಶುರುಮಾಡಿದ ಮೇಲೆ ಕತೆಗಳನ್ನು ಅರಿಯಲು ಬಹಳಷ್ಟು ಕತೆಗಳನ್ನು ಓದಿದೆ. ಆದರೂ ಬರೆಯಲು ಸಾಕಷ್ಟು ಕಷ್ಟವಾಗುತ್ತಿತ್ತು. ಆಗ ನಾನು ಕಂಡುಕೊಂಡ ಉಪಾಯವೇನೆಂದರೆ ಇಂಗ್ಲೀಷ್ ಕತೆಗಳನ್ನು ಕನ್ನಡಕ್ಕೆ ಅನುವಾದಿಸುವುದು. ಇದುವರೆವಿಗೂ ಕೆಲವು ಕತೆಗಳನ್ನು ಅನುವಾದಿಸಿ ಅವು ಪ್ರಕಟಗೊಂಡಿವೆ. ಮೊತ್ತ ಮೊದಲ ಅನುವಾದದ ಕತೆ ಪ್ರಕಟವಾದದ್ದು ಉದಯವಾಣಿಯಲ್ಲಿ. ಈ ವಿಷಯ ನನಗೆ ಮೊದಲು ಗೊತ್ತಾದ್ದದ್ದು ಮೂರು ತಿಂಗಳ ನಂತರ! ಅದನ್ನು ಮೊದಲು ನನಗೆ ತಿಳಿಸಿದ್ದು ಉದಯ್ ಇಟಗಿ ಸರ್. ಅವರು ಅಂದು ಮಧ್ಯರಾತ್ರಿ (ಆಗ ಫೇಸ್ ಬುಕ್ ಹೊಸದು) ಫೇಸ್ ಬುಕ್ ನೋಡುತ್ತಿದ್ದಾಗ ಚಾಟ್ ನಲ್ಲಿ ವಿಷಯ ತಿಳಿಸಿದರು. ಆಗ ನನಗಾದ ಖುಷಿ ಅಷ್ಟಿಷ್ಟಲ್ಲ.
ಆನಂತರ ನಾನೇ ಒಂದಷ್ಟು ಸ್ವಂತ ಕತೆಗಳನ್ನು ಬರೆದೆ, 'ಉಘೇ ಉಘೇ' ಸಂಕಲನವನ್ನೂ ಪ್ರಕಟಿಸಿದೆ. ಕೆಲವರ ಪ್ರೋತ್ಸಾಹವೂ ಸಿಕ್ಕಿತು. ಈ ಕುರಿತು ತದನಂತರ ಬರೆಯುವೆ. ಆನಂತರ ಅದಾಗಲೇ ಆತ್ಮೀಯರಾಗಿದ್ದ ಶಿವು ಕೆ. ಅವರ 'ವೆಂಡರ್ ಕಣ್ಣು' ಪ್ರಬಂಧಗಳನ್ನು ಇಂಗ್ಲೀಷಿಗೆ ಅನುವಾದಿಸಿ ಅದನ್ನು 'Boys Of The Dawn' ಎಂದು ಸಂಕಲಿಸಿ ಪ್ರಕಟಿಸಿದೆ. ಈ ಪುಸ್ತಕವು ನಮ್ಮ ವಲಯದಲ್ಲಿ ಹಲವರ ಮೆಚ್ಚುಗೆಗೆ ಪ್ರಾಪ್ತವಾಯಿತು.
ಆದರೆ, ಇರಲಿ ನಿಮ್ಮಲ್ಲಿ ಹೇಳಿಯೇ ಬಿಡುವೆ: ಈ 'ಸಾಹಿತ್ಯ-ಪ್ರಶಸ್ತಿ-ರಾಜಕಾರಣ' ನನ್ನಲ್ಲಿದ್ದ ಹುಮ್ಮಸ್ಸನ್ನು ನುಂಗಿ ನೀರು ಕುಡಿದು ಬಿಟ್ಟಿತು. ಅದ್ಯಾಕೋ ಗೊತ್ತಿಲ್ಲ ಈ ಎರಡೂ ಪುಸ್ತಕಗಳಿಗೆ ಬರಬೇಕಿದ್ದ ಪ್ರಶಸ್ತಿ ಇನ್ನೇನು ಬಂತು ಅನ್ನುವಾಗಲೇ ಬರಲಿಲ್ಲ. ಆನಂತರ ದಿನೇ ದಿನೇ ನನ್ನ ಆಸಕ್ತಿ (ಯಾಕೆಂದರೆ ಪ್ರಶಸ್ತಿ, ಬಹುಮಾನಗಳನ್ನು ನಾನು ಕೆಟಲಿಸ್ಟ್ ಅನ್ನುತ್ತೇನೆ) ಸಹಜವಾಗಿ ಕುಗ್ಗಿತು. ಇತ್ತೀಚೆಗೆ ಕಾರಣಗಳೂ ತಿಳಿದವು. ಹೋಗಲಿಬಿಡಿ ಎನ್ನಲು ಕನ್ನಡದಲ್ಲೇನು ಸಾವಿರಾರು ಪ್ರತಿಗಳು ಪುಸ್ತಕಗಳು ಮಾರಾಟವಾಗುವುದಿಲ್ಲ. ಪ್ರಶಸ್ತಿ, ಪುರಸ್ಕಾರಗಳು ದೊರೆತರೆ ಒಂದೈದು ಪ್ರತಿಗಳು ಹೆಚ್ಚು ಹೋಗಬಹುದು ಅಷ್ಟೆ. ಆದರೆ, ನಗದು ಬಹುಮಾನ ದೊರೆತರೆ ಆ ಹಣದಿಂದ ಮತ್ತೊಂದು ಪುಸ್ತಕವನ್ನು ಪ್ರಕಟಿಸಬಹುದು ಎಂಬುದು ನನ್ನ ಜಿಜ್ಞಾಸೆಯಷ್ಟೆ.
ಒಟ್ಟಿನಲ್ಲಿ ಖುಷಿಗಾಗಿ ಬರವಣಿಗೆ ಆರಂಭಿಸಿದವನು ಒಬ್ಬ ಸಾಹಿತಿಗೆ ಇರಬೇಕಾದ ಸಾಮಾಜಿಕ ಜವಾಬ್ದಾರಿಯ ಬಗ್ಗೆಯೂ ಬಹಳ ಬೇಗ ಅರಿತಿದ್ದೇನೆ. ಆ ನಿಟ್ಟಿನಲ್ಲಿ ನಾನೇನೇ ಬರೆದರು 'ಸ್ನೇಹ-ಪ್ರೀತಿ-ಜೀವನ' ವಸ್ತು ಬಹಳವಾಗಿ ಇರುತ್ತದೆ. ನನ್ನ ಪುಸ್ತಕಗಳಲ್ಲಿ ನನ್ನ ಬಯೋಡೇಟಾ ಪುಟದಲ್ಲಿ 'ವೀರಶೈವ ಬ್ಯಾಂಕ್ ಉದ್ಯೋಗಿ' ಎಂಬುದೇ ನನ್ನ ಪುಸ್ತಕಗಳಿಗೆ ಪ್ರಶಸ್ತಿ ಬಾರದಿರಲು ಕಾರಣವೆಂದು ತಿಳಿದಾಗ ಮಾತ್ರ ನಗಬೇಕೋ, ಅಳಬೇಕೋ ಎಂದು ಬಹಳ ನೊಂದಿದ್ದೇನೆ. ನನಗೆ ಬುದ್ಧಿ ಬಂತು ಎಂದ ಕ್ಷಣದಿಂದ ನಾನು 'ವಿಶ್ವ ಮಾನವ!'. ಇವತ್ತಿಗೂ ಹಾಗೇ ಬದುಕುತ್ತಿದ್ದೇನೆ. ಮುಂದೆಯೂ... ಇಷ್ಟು ವರ್ಷಗಳಲ್ಲಿ ಜಗತ್ತು ಬಹಳ ಅರ್ಥವಾಗಿಬಿಟ್ಟಿದೆ. ಒಂದಾನೊಂದು ಕಾಲದಲ್ಲಿ ಬಹಳ ಗಂಭೀರವಾಗಿರಬೇಕೆಂದುಕೊಂಡವನು ಅದರಲ್ಲಿ ಅರ್ಥವೂ ಇಲ್ಲ, ಜೀವನದ ಸಾರವೂ ಇಲ್ಲ ಎಂದು ನಾನು ನಾನಾಗೇ ಇದ್ದುಬಿಟ್ಟಿದ್ದೇನೆ. ಇಷ್ಟೆಲ್ಲಾ ಹೇಳಲು ಮೂಲ ಕಾರಣ ಮನಸ್ಸಿನ ಮೂಲೆಯಲ್ಲಿರುವ ಯಾವುದೋ ನೋವಿರಬಹುದು. ಅದು ಗೊತ್ತಿಲ್ಲ. ಫೇಸ್ ಬುಕ್ಕಿನಲ್ಲಿ ಇಷ್ಟೆಲ್ಲಾ ಇದೇ ಮೊದಲ ಬಾರಿಗೆ ನಾನು ಬರೆಯುತ್ತಿರುವುದು. ಮೂಲತಃ ಬ್ಲಾಗರ್ ಆಗಿದ್ದ ನನಗೆ ಇಷ್ಟು ಬರೆಯಲು ಕಷ್ಟವೇನು ಇರದು. ಇನ್ಮುಂದೆ ಬರೆಯಲೇ ಬೇಕಿದೆ...

ನಾನು ಕನ್ನಡದಿಂದ ಇಂಗ್ಲೀಷಿಗೆ ಅನುವಾದಿಸಿದ ಮೊದಲ ಪುಸ್ತಕ ಕೊಂಡು ಓದಲು...
https://imojo.in/2mm893c

ಈ ಪ್ರತಿಷ್ಠಿತ ಕಥಾ ಮತ್ತು ಕಾದಂಬರಿ ಸ್ಪರ್ಧೆಗೆ ಇನ್ನೇರಡೇ ದಿನ ಬಾಕಿ…

  ಈ ಪ್ರತಿಷ್ಠಿತ ಕಥಾ ಮತ್ತು ಕಾದಂಬರಿ ಸ್ಪರ್ಧೆಗೆ ಇನ್ನೇರಡೇ ದಿನ ಬಾಕಿ… ನಾಡಿನ ಪ್ರತಿಷ್ಠಿತ ʻ ಬುಕ್ ‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು...